(ಕರ್ಟೆಸೀ: ವೆಬ್ ದುನಿಯಾ)
Wednesday, December 31, 2008
ಕನ್ನಡ ಪ್ರೇಮಿ ಪೂಜಾಗಾಂಧಿ...
Friday, November 21, 2008
Saturday, October 11, 2008
ಅಗ್ನಿ ಶ್ರೀಧರ್ ಬತ್ತಳಿಕೆಯಲ್ಲಿನ ಹೊಸ ಅಸ್ತ್ರ!
ಬರಹಗಾರ ಹಾಗೂ 'ಅಗ್ನಿ ' ವಾರಪತ್ರಿಕೆಯ ಸಂಪಾದಕ ಶ್ರೀಧರ್ ಮಾತನಾಡುತ್ತಾ, ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ, ಜವಾಬ್ದಾರಿಯುತವಾದ ಚಿತ್ರಗಳನ್ನು ನಿರ್ಮಿಸಬೇಕಾಗಿದೆ ಎಂದರು. ಸುಮನಾ ಕಿತ್ತೂರು ಅವರು ಈ ಚಿತ್ರವನ್ನು ಮಾಡಲು ಬಹಳಷ್ಟು ಹೆಣಗಿದ್ದಾರೆ. ಪ್ರತಿ ಫ್ರೇಂನಲ್ಲೂ ಅವರ ಪ್ರತಿಭೆ ಎದ್ದು ಕಾಣುತ್ತದೆ. ಸ್ಲಂ ಬಾಲನ ಪಾತ್ರದಲ್ಲಿ ಕಾಣಿಸುವ ವಿಜಯ್ ಸಹ ಈ ಪಾತ್ರಕ್ಕಾಗಿ ಬಹಳಷ್ಟು ಶ್ರಮಿಸಿದ್ದಾರೆ. ನನ್ನ ಪುಸ್ತಕದಲ್ಲಿನ ಮತ್ತೊಂದು ಪಾತ್ರವಾದ ರಜ್ಜುವಿನ ಪಾತ್ರ ನಿರೂಪಣೆ ಅದ್ಭುತವಾಗಿ ಮೂಡಿಬಂದಿದೆ ಎಂದು ಶ್ರೀಧರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಶ್ರೀಧರ್ ಮತ್ತೊಂದು ವಿಷಯವನ್ನ್ನು ತಿಳಿಸಿದರು. ಮಲಯಾಳಂ ನಟ ಮೋಹನ್ ಲಾಲ್ ಅವರೊಂದಿಗೆ ಚಿತ್ರವನ್ನು ನಿರ್ದೇಶಿಸುವ ಇಂಗಿತವನ್ನು ಅವರು ವ್ಯಕ್ತಪಡಿಸಿದರು. ಮುಂದಿನ ವರ್ಷಮೋಹನ್ ಲಾಲ್ ಕಾಲ್ ಷೀಟ್ ಸಿಗುವ ಸಾಧ್ಯತೆಗಳಿವೆ.ತಮ್ಮ ಬತ್ತಳಿಕೆಯಲ್ಲಿ ಸಾಕಷ್ಟು ಅಸ್ತ್ರಗಳನ್ನು ಇಟ್ಟುಕೊಂಡಿರುವ ಅಗ್ನಿ ಶ್ರೀಧರ್, ಮುಂದಿನ ದಿನಗಳಲ್ಲಿ ಅವುಗಳನ್ನು ಒಂದಾಗಿ ಪ್ರಯೋಗಿಸಿ ಪ್ರೇಕ್ಷಕರ ಮೆಚ್ಚುಗೆ ಗಳಿಸುವ ದಿನಗಳು ದೂರವಿಲ್ಲ.
ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಕವಿ ಸಿದ್ಧಲಿಂಗಯ್ಯ, ಇಂದುಧರ ಹೊನ್ನಾಪುರ, ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಎಚ್.ಡಿ.ಗಂಗರಾಜು, ನಿರ್ಮಾಪಕ ಕನಕಪುರ ಶ್ರೀನಿವಾಸ್, ನಾಯಕ ನಟ ವಿಜಯ್ ಹಾಗೂ ನಾಯಕಿ ಶುಭಾ ಪುಂಜಾ ಉಪಸ್ಥಿತರಿದ್ದರು. ಇಂದುಧರ ಹೊನ್ನಾಪುರ ಮಾತನಾಡುತ್ತಾ, ಸ್ಲಂ ಬಾಲ ಎಲ್ಲ ಚಿತ್ರಗಳಂತಲ್ಲದ ಉತ್ತಮ ಗುಣಮಟ್ಟದಿಂದ ಕೂಡಿದ ಚಿತ್ರ ಎಂದರು. ಈ ರೀತಿಯ ಚಿತ್ರ ಕನ್ನಡದಲ್ಲಿ ಮಾತ್ರ ಮಾಡಲು ಸಾಧ್ಯ. ಜೀವನದ ಪ್ರತಿ ಹೆಜ್ಜೆಯಲ್ಲೂ ಭೂಗತ ಜಗತ್ತು ಹೇಗೆ ತನ್ನ ಕರಾಳ ಹಸ್ತಗಳನ್ನು ಚಾಚಿದೆ ಎಂಬುದು ಈ ಚಿತ್ರ ನೋಡಿದ ನಂತರ ತಿಳಿಯುತ್ತದೆ ಎಂದು 'ಸ್ಲಂ ಬಾಲ'ನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
Thursday, October 9, 2008
ಪೂಜಾಗಾಂಧಿ ಜನ್ಮ ದಿನೊತ್ಸವ
ಹೆಂಗಸರ ವಯಸ್ಸು, ಗಂಡಸರ ಸಂಬಳ ಕೇಳಬಾರದು ಎಂಬ ಗಾದೆಯೇ ಇರುವುದರಿಂದ ಪೂಜಾ ವಯಸ್ಸು ಇಲ್ಲಿ ಅಪ್ರಸ್ತುತ. ಪ್ರಸ್ತುತ ಪೂಜಾ 'ಗಾಂಧಿ'ನಗರದಲ್ಲಿ ಬ್ಯುಸಿಯಾಗಿರುವ ನಟಿ. ಜನುಮದ ಗೆಳತಿ, ಮಹರ್ಷಿ, ಅನು ಚಿತ್ರಗಳು ತೆರೆಕಾಣಬೇಕಾಗಿವೆ। ತಮಿಳಿನಲ್ಲಿ ಅರ್ಜುನ್ ಸರ್ಜಾ ಜತೆ ಒಂದು ಚಿತ್ರಕ್ಕೆ ಆಯ್ಕೆಯಾಗಿದ್ದಾರೆ. ಇಂದು ಅವರು ಬೆಂಗಳೂರಿನ ರಮಣಶ್ರೀ ಅಂಧರ ಶಾಲೆಯ ಮಕ್ಕಳ ಜೊತೆ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
Monday, October 6, 2008
ಮದಕರಿ ಸುದೀಪರ ಕಳ್ಳ ಪೊಲೀಸ್ ಆಟ
Monday, September 29, 2008
ಗಾನಕೋಗಿಲೆ ಲತಾ ಮಂಗೇಶ್ಕರ್ ಜನ್ಮದಿನೋಸ್ತವ
ವಿಕ್ರಂ ಭಟ್ ರ ''1920'' ಎಂಬ ಬಾಲಿವುಡ್ ಚಿತ್ರದಲ್ಲಿ ಲತಾ ಅವರು ಪಂಡಿತ್ ಜಸ್ ರಾಜ್ ಹಾಗೂ ಆಶಾ ಬೋಂಸ್ಲೆ ಯೊಂದಿಗೆ ತೀರಾ ಇತ್ತೀಚೆಗಷ್ಟೆ ಹಾಡಿದ್ದರು। ತಮ್ಮ 75 ನೇ ಹುಟ್ಟುಹಬ್ಬವನ್ನು ಲತಾ ಮಂಗೇಶ್ಕರ್ ಮುಂಬೈನ ತಮ್ಮ ನಿವಾಸದಲ್ಲಿ ಆಚರಿಸಿಕೊಂಡಿದ್ದರು. ಆಗ ಅವರ ಹುಟ್ಟು ಹಬ್ಬದ ಸಮಾರಂಭಕ್ಕೆ ಶರದ್ ಪವಾರ್, ಎಲ್.ಕೆ.ಅಡ್ವಾಣಿ ಹಾಜರಾಗಿದ್ದರು. ಅವರು ತಮ್ಮ ಹುಟ್ಟುಹಬ್ಬವನ್ನು ಮುಂಬೈಯಲ್ಲಿ ಆಚರಿಸಿಕೊಂಡಿದ್ದೆ ವಿರಳ. ಅವರು ಯಾವತ್ತು ಪುಣೆ ಅಥವಾ ಕೊಲ್ಲಾಪುರದ ತಮ್ಮ ನಿವಾಸಗಳಲ್ಲಿ ಸರಳವಾಗಿ, ಖಾಸಗಿಯಾಗಿ ಹುಟ್ಟುಹಬ್ಬವನ್ನು ಆಚರಿಕೊಳ್ಳುತ್ತಿದ್ದರು.
ಖ್ಯಾತ ರಂಗಭೂಮಿ ಕಲಾವಿದ ದೀನಾನಾಥ್ ಮಂಗೇಶ್ಕರ್ ಪುತ್ರಿಯಾಗಿ ಲತಾ ಮಂಗೇಶ್ಕರ್ ಜನಿಸಿದ್ದು 1929ರಲ್ಲಿ। ತಂದೆ ಅಕಾಲಿಕ ಮರಣಕ್ಕೀಡಾದಾಗ 13ರ ಹರಯದಲ್ಲಿದ್ದ ಲತಾ ಅವರಿಗೆ ಸಂಸಾರದ ಹೊಣೆ ಹೆಗಲೇರಿತು. ಸಂಸಾರ ನೌಕೆಯನ್ನು ಸಾಗಿಸಲು ಮೊದಲು ಲತಾ ಆಯ್ಕೆ ಮಾಡಿಕೊಂಡಿದ್ದು ನಟನೆಯನ್ನು. ಹಾಗಾಗಿ ಅವರು ಒಂಬತ್ತು ಚಿತ್ರಗಳಲ್ಲಿ ನಟಿಸಿದ್ದಾರೆ. ನಂತರ ಹಾಡಲು ಅವಕಾಶಗಳು ದೊರೆತ ಬಳಿಕ ಗಾಯಕಿಯಾಗಿ ಬದಲಾದರು.
ಆರಂಭದಲ್ಲಿ ಲತಾ ಅವರಿಗೆ ನಟಿಯಾಗಿಯೇ ಮುಂದುವರಿಯುವ ಆಲೋಚನೆ ಇತ್ತು। 1947ರಲ್ಲಿ ಬಿಡುಗಡೆಯಾದ 'ಆಪ್ ಕಿ ಸೇವಾ ಮೆ' ಚಿತ್ರದಲ್ಲಿ ಹಾಡಲು ಮೊದಲ ಅವಕಾಶ ದೊರೆಯಿತು. ಅಲ್ಲಿಂದ ಅವರು ಹಿಂತಿರುಗಿ ನೋಡಿದ್ದೆ ಇಲ್ಲ. ಹಲವಾರು ಭಾಷೆಗಳಲ್ಲಿ ಹಾಡಿರುವ ಲತಾ ಮಂಗೇಶ್ಕರ್ ಕನ್ನಡ ಚಿತ್ರ 'ಸಂಗೊಳ್ಳಿ ರಾಯಣ್ಣ' ಚಿತ್ರದಲ್ಲಿ ಬೆಳ್ಳನೆ ಬೆಳಗಾಯಿತು ಎಂದು ಹಾಡಿದ್ದರು. ನಂತರ ಈ ಗಾನಕೋಗಿಲೆ ಕನ್ನಡಲ್ಲಿ ಹಾಡಲಿಲ್ಲ.
Thursday, September 25, 2008
ಡಾ.ರಾಜ್ ಸ್ಮಾರಕ ಅಭಿವೃದ್ಧಿಗೆ ಕಟ್ಟಾ ಭರವಸೆ
Tuesday, September 23, 2008
ದುಬೈ ಬಾಬು (ಉಪೇಂದ್ರ) ಹಿರೋಯಿನ್ ನಿಕಿತ
Thursday, September 18, 2008
ಗಿರೀಶ್ ಕಾಸರವಳ್ಳಿ "ಗುಲಾಬಿ ಟಾಕಿಸ್"
ಗಿರೀಶ್ ಕಾಸರವಳ್ಳಿ ಸಿನಿಮಾ ಅಂದರೆ ಅಲ್ಲಿ ಏನೋ ವಿಶೇಷ ಇರುತ್ತದೆ. ಅದು ಕಾದಂಬರಿ ಯೊಂದನ್ನು ಆಧರಿಸಿದ ಚಿತ್ರವಾದರೂ ಅಲ್ಲಿ ಕಾಸರವಳ್ಳಿ ಘಮಲು, ಕಲಾತ್ಮಕತೆಯ ಸೊಗಡು, ಮಣ್ಣಿನ ವಾಸನೆಯಿರುತ್ತದೆ. ಕೊನೆಗೊಂದು ಸಂದೇಶದ ಜತೆಗೆ ಬಿಡಿಸಲಾಗದ ಬದುಕಿನ ಸತ್ಯ ದರ್ಶನ. ಆ ಮೂಲಕ `ಇದಕ್ಕೆ ನೀವೇ ಉತ್ತರ ಕಂಡುಕೊಳ್ಳಿ' ಎಂದು ಪರೋಕ್ಷವಾಗಿ ಸಮಾಜಕ್ಕೆ ಸವಾಲು ಹಾಕುತ್ತಾರೆ ಕಾಸರವಳ್ಳಿ. ಅವರದೇ ಆದ ನಿರೂಪಣಾ ಶೈಲಿ, ನವಿರಾದ ಚಿತ್ರಕತೆ, ಸಹಜ ಸಂಭಾಷಣೆ ಕತೆಗೊಂದು ಸುವರ್ಣ ಚೌಕಟ್ಟು ಹಾಕುತ್ತದೆ.
Wednesday, September 10, 2008
ಪುನೀತ್ ವಿಗ್1 ಲಕ್ಷ
Tuesday, September 2, 2008
ಸ್ವರ್ಣಗೌರಿ ವ್ರತದ ಕಥೆ
ನಂತರ ಅವರಿಗೆ ಪುತ್ರ ಸಂತಾನ ಪ್ರಾಪ್ತಿಯಾಗಿ ಸತಿಪತಿಯರು ಶಿವಲೋಕವನ್ನು ಹೊಂದಿ ಮುಕ್ತಿಯನ್ನು ಪಡೆದರೆಂಬ ಪ್ರತೀತಿ ಪುರಾಣ ಕಥೆಗಳಲ್ಲಿ ಉಲ್ಲೇಖವಾಗಿದೆ. ಈ ಸ್ವರ್ಣಗೌರಿ ಹಬ್ಬದಲ್ಲಿ ಬಾಗಿನ ಕೊಡುವುದು ಒಂದು ವಿಶೇಷ. ಅಂದರೆ ಗೌರವಪೂರ್ಣವಾಗಿ ಕೊಡುವ ದಾನ ಅಥವಾ ಸತ್ಕಾರವೆಂದು ಕರೆಯುತ್ತಾರೆ.ಅಕ್ಕ ತಂಗಿಯರಿಗೆ ಸಹೋದರನು ಬಾಗಿನ ಕೊಡಬೇಕಾಗುತ್ತದೆ. ಈ ಬಾಗಿನವನ್ನು ಪಡೆಯುವುದರಿಂದ ಮುತ್ತೈದೆಯರು ಸೌಭಾಗ್ಯವನ್ನು ಪಡೆಯುತ್ತಾರೆ ಎನ್ನುವ ನಂಬಿಕೆ ಇದೆ. ಗೌರಿಯನ್ನು ಕೂರಿಸಿ ಪೂಜೆ ಮಾಡುವ ಪದ್ಧತಿ ಎಲ್ಲರ ಮನೆಯಲ್ಲಿ ಇರುವುದಿಲ್ಲ. ಆದ್ದರಿಂದ ಸುಮಂಗಲಿಯರು ಗೌರಿಯನ್ನು ಪೂಜಿಸುವವರ ಮನೆಗೆ ಹೋಗಿ ಪೂಜೆ ಸಲ್ಲಿಸಿ ಬರುತ್ತಾರೆ.
ಮುತ್ತೈದೆಯರು ಸ್ವರ್ಣಗೌರಿ ವ್ರತವನ್ನು ನಿಷ್ಠೆಯಿಂದ ಆಚರಿಸಿದಲ್ಲಿ ಖಂಡಿತವಾಗಿ ಸಂತಾನ ಪ್ರಾಪ್ತಿ, ಅವಿವಾಹಿತರಿಗೆ ವಿವಾಹಯೋಗ ಮತ್ತು ವಿದ್ಯಾರ್ಥಿಗಳಿಗೆ ಜ್ಞಾನ ದೊರೆಯುತ್ತದೆ ಎನ್ನುವುದು ಪುರಾಣ ಕಥೆಗಳಲ್ಲಿ ಹೇಳಲಾಗಿದೆ.ಈಗಿನ ಆಧುನಿಕ ಯುಗದಲ್ಲಿ ಗೌರಿ ಮತ್ತು ಗಣೇಶನ ಮೂರ್ತಿಗಳನ್ನು ವಿವಿಧ ರೂಪದಲ್ಲಿ ತಯಾರಿಸಿದರೂ ಬಣ್ಣ ರಹಿತವಾದ ಮೂರ್ತಿಗಳು ಪೂಜೆಗೆ ಶ್ರೇಷ್ಠ ಎನ್ನುವುದು ನಂಬಿಕೆ. ಸ್ವರ್ಣಗೌರಿ ಹಬ್ಬದ ದಿನ ಈ ಕೆಳಗಿನ ಶ್ಲೋಕವನ್ನು 108 ಬಾರಿ ಶ್ರದ್ಧಾ ಭಕ್ತಿಯಿಂದ ಆಚರಿಸಿದಲ್ಲಿ, ಜಪಿಸಿದಲ್ಲಿ ತಮ್ಮ ಬೇಡಿಕೆಗಳು ಪೂರೈಸುತ್ತವೆ ಎನ್ನುವ ನಂಬಿಕೆ ಇದೆ.
"ಸರ್ವಮಂಗಳ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೇ