Wednesday, March 12, 2008

ಕ್ರೇಜಿ ಸ್ಟಾರ್ ರವಿಚಂದ್ರನ್ "ನಾ ಟಾಟಾ ನೀ ಬಿರ್ಲಾ" ಸಿದ್ಧ

(ಕರ್ಟೆಸಿ:ದಟ್ಸ್‌ಕನ್ನಡ)
ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗೂ ನವರಸ ನಾಯಕ ಜಗ್ಗೇಶ್ ಮತ್ತೆ ಒಂದಾಗಿ ಅಭಿನಯಿಸುತ್ತಿದ್ದು, ಹಾಸ್ಯಭರಿತ ಚಿತ್ರ 'ನಾ ಟಾಟಾ ನೀ ಬಿರ್ಲಾ' ಚಿತ್ರದಲ್ಲಿ ಮೋಹಕ ತಾರೆ ಜೆನ್ನಿಫರ್ ಕೋತ್ವಾಲ್ ಹಾಗೂ ಮುಂಗಾರು ಮಳೆ ಹುಡುಗಿ ಪೂಜಾಗಾಂಧಿ ಜತೆ ಕುಣಿಯಲಿದ್ದಾರೆ.
ಕಳೆದವಾರ ಬೆಂಗಳೂರಿನಲ್ಲಿ ಬಿರ್ಲಾ ತನ್ನ ಸಂಗಾತಿಯೊಡನೆ ಕುಣಿದಿದ್ದನ್ನು ಚಿತ್ರೀಕರಿಸಿಕೊಂಡ ನಿರ್ದೇಶಕ ಮಾಗಡಿ ಪಾಂಡು ಬ್ಯಾಂಕಾಕ್‌ಗೆ ತೆರಳಿದ್ದಾರೆ. ಅಲ್ಲಿ ಟಾಟಾ ಪಾತ್ರಧಾರಿ ರವಿಚಂದ್ರನ್ ಹಾಗೂ ಬೆಡಗಿ ಜನ್ನಿಫರ್ ಕೊತ್ವಾಲ್ ಅವರ ಅಭಿನಯದಲ್ಲಿ ಹೃದಯಶಿವ ಅವರು ಬರೆದಿರುವ . 'ಮುತ್ತು ಕೊಡಲ ಮುತ್ತು ಕೊಡಲ ಮನಸಾರೆ ಕಣ್ಣಿಗೊಂದನ್ನು ಒತ್ತಿ ಬಿಡಲೆ ಒತ್ತಿ ಬಿಡಲೆ ಮನಸಾ ಈ ಕಾಲಿಂಗ್ ಬೆಲ್ಲನು' ಗೀತೆಯನ್ನು ಚಿತ್ರೀಕರಿಸಿಕೊಂಡಿದ್ದಾರೆ. ಈ ಗೀತೆಯ ಚಿತ್ರೀಕರಣದೊಂದಿಗೆ ಮದರ್ ಇಂಡಿಯಾ ಮೂವೀಟೋನ್ ಲಾಂಛನದಲ್ಲಿ ರವಿಕುಮಾರ್ ಹಾಗೂ ಎಸ್.ಎನ್.ದೊಡ್ಡೇಗೌಡರು ನಿರ್ಮಿಸುತ್ತಿರುವ 'ನಾ ಟಾಟಾ ನೀ ಬಿರ್ಲಾ ' ಚಿತ್ರಕ್ಕೆ ಚಿತ್ರೀಕರಣ ಮುಕ್ತಾಯವಾಗಿದೆ. ಕೌಟುಂಬಿಕ ಸನ್ನಿವೇಶದೊಂದಿಗೆ ಹಾಸ್ಯದ ಹೊನಲಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ಸಂಯೋಜಿಸಿದ್ದಾರೆ. ರಮೇಶ್‌ಬಾಬು ಛಾಯಾಗ್ರಹಣ, ವಿ.ಮನೋಹರ್ ಗೀತರಚನೆ, ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ, ಲಕ್ಷ್ಮಣರೆಡ್ಡಿ ಸಂಕಲನ, ಕಡೂರುಶಿವು, ಜಿ.ಎಸ್.ವೇದಾಂತ್ ಸಹನಿರ್ದೇಶನ, ಇಸ್ಮಾಯಿಲ್ ಕಲೆ, ಮಲ್ಲಿಕಾರ್ಜುನ್ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ರವಿಚಂದ್ರನ್, ಜಗ್ಗೇಶ್, ಜನ್ನಿಫರ್ ಕೊತ್ವಾಲ್, ಪೂಜಾಗಾಂಧಿ, ನಿಖಿತಾ, ಕೀರ್ತಿಚಾವ್ಲಾ, ಊರ್ವಶಿ, ಜ್ಯೋತಿರಾಣಾ, ಸಾಧುಕೋಕಿಲಾ, ದೊಡ್ಡಣ್ಣ ಮುಂತಾದವರಿದ್ದಾರೆ.

1 comment:

Sushrutha Dodderi said...

ಪ್ರಿಯ ಪ್ರವೀಣ್,

ನಮಸ್ಕಾರ. ಹೇಗಿದ್ದೀರಿ?

ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮ್ಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ!

ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ 'ಪ್ರಣತಿ', ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ. ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.

ಡೇಟು: ೧೬ ಮಾರ್ಚ್ ೨೦೦೮
ಟೈಮು: ಇಳಿಸಂಜೆ ನಾಲ್ಕು
ಪ್ಲೇಸು: ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌, ಬಸವನಗುಡಿ, ಬೆಂಗಳೂರು

ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ| ಯು.ಬಿ. ಪವನಜ, 'ದಟ್ಸ್ ಕನ್ನಡ'ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, 'ಸಂಪದ'ದ ಹರಿಪ್ರಸಾದ್ ನಾಡಿಗ್, 'ಕೆಂಡಸಂಪಿಗೆ'ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.

ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, 'ಪ್ರಣತಿ'ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.

ಅಲ್ಲಿ ಸಿಗೋಣ,
ಇಂತಿ,

ಸುಶ್ರುತ ದೊಡ್ಡೇರಿ